Wednesday 22 November 2017

ಗ್ರಂಥ ಸಂಪದ




           ಈ ಪುಸ್ತಕವು ರಾಷ್ಟ್ರೀಯ ಬಸವ ಪುರಸ್ಕಾರ ಪ್ರಶಸ್ತಿ ವಿಜೇತ ರಂಜಾನ ದರ್ಗಾ ರವರ ಇತ್ತೀಚಿನ ಕೃತಿ. ದರ್ಗಾರವರು ಬಂಡಾಯ ಸಾಹಿತ್ಯ ಪರಂಪರೆಯ ಶಕ್ತಿ ಶಾಲಿ ಕವಿಗಳಲ್ಲಿ ಒಬ್ಬರು. ಸಮತಾವಾದ ಮತ್ತು ಸೂಫಿ ವಿಚಾರಗಳ ನೆಲೆಯಲ್ಲಿ ವಚನ ಚಳವಳಿಯ ತತ್ವಗಳಿಗೆ ಹೊಸ ಹೊಲವು ನೀಡುವ ಪ್ರಯತ್ನವನ್ನು ಅವರು ಮಾಡಿದ್ದಾರೆ. 
    ಬಸವಣ್ಣನವರ ಏಕದೇವೋಪಾಸನೆಯ ಧರ್ಮ ಸಂಪೂರ್ಣ ಕ್ರಾಂತಿಕಾರಿ ಧರ್ಮವಾಗಿದೆ. ಇಡೀ ಜಗತ್ತಿನಲ್ಲಿ ದೇವಸ್ಥಾನಳಿಲ್ಲದ ಧರ್ಮ ಎಂದರೆ ಲಿಂಗಾಯತ ಧರ್ಮ ಒಂದೇ ಆಗಿದೆ. ಈ ಧರ್ಮದಲ್ಲಿ ಮಾನವರೇ ಜೀವಂತ ದೇವಾಲಯಗಳಾಗಿದ್ದಾರೆ. ನಾವು ನಮ್ಮೊಳಗಿನ ದೇವರ ಜೊತೆ ಒಂದಾಗುವುದೇ ಲಿಂಗಸಾಮರಸ್ಯ. ಲಿಂಗವಂತ ಧರ್ಮದಲ್ಲಿ ಏನ್ನುಂಟು ಎನಿಲ್ಲ? ಈ ಕೃತಿಯಲ್ಲಿ ಹಲಾವಾರು ಸೂಕ್ಷ್ಮ ವಿಚಾರಗಳನ್ನು ಇಲ್ಲಿ ಬಿಚ್ಚಿಟ್ಟಿದ್ದಾರೆ. ಈ ಪುಸ್ತಕ ಲಡಾಯಿ ಪ್ರಕಾಶನ ಗದಗ ಇವರಿಂದ 2017ರ ಸಾಲಿನಲ್ಲಿ ಪ್ರಕಟಗೊಂಡಿದೆ. ಪುಟ.ಸಂ 64, ಬೆಲೆ ರೂ. 30.

No comments:

Post a Comment